Saturday, June 28, 2025
spot_imgspot_img
spot_imgspot_img

ಮಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ರಂಗಕರ್ಮಿ ಸದಾನಂದ ಸುವರ್ಣ ನಿಧನ

- Advertisement -
- Advertisement -

ಮಂಗಳೂರು: ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ವಯೋಸಹಜ ಅಸ್ವಸ್ಥತೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

‘ಘಟಶ್ರಾದ್ಧ’ ಸಿನಿಮಾ ಮೂಲಕ ಸದಾನಂದ ಸುವರ್ಣ ನಿರ್ಮಾಪಕರಾಗಿದ್ದರು. ಮೂಲತಃ ಮುಲ್ಕಿಯವರಾದ ಅವರು ನಿರ್ಮಿಸಿದ ಮೊದಲ ಘಟಶ್ರಾದ್ಧ ಚಿತ್ರಕ್ಕೆ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ್ದರು.
ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳಿಗೆ ಸದಾನಂದ ಸುವರ್ಣ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ‘ಗುಡ್ಡದ ಭೂತ’ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಖ್ಯಾತ ನಟ ಪ್ರಕಾಶ್ ರಾಜ್ ಅವರ ಕೆರಿಯರ್ ಗೆ ಬ್ರೇಕ್ ಕೊಟ್ಟಿತು.

ನಾಳೆ ಪುರಭವನದಲ್ಲಿ ಮಧ್ಯಾಹ್ನ 1 ರಿಂದ 3 ಗಂಟೆ ತನಕ ಮೃತರ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರಿಚ್ಛೆಯಂತೆ ದೇಹದಾನ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!