- Advertisement -
- Advertisement -
ನವದೆಹಲಿ: ನೈಸರ್ಗಿಕ ಅನಿಲ ಭಾರತದಾದ್ಯಂತ ಏಕರೂಪದ ದರ ಹಾಗೂ ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಲು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಈ ಕುರಿತು ತಮಿಳುನಾಡಿನಲ್ಲಿ ಹಮ್ಮಿಕೊಳ್ಳಲಾಗಿರುವ ತೈಲ ಮತ್ತು ಅನಿಲ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, “ಭಾರತವು ತೈಲ ಮತ್ತು ಅನಿಲ ಮೂಲಸೌಕರ್ಯ ನಿರ್ಮಾಣಕ್ಕೆ 5 ವರ್ಷಗಳಿಗೆ 7.5 ಲಕ್ಷ ಕೋಟಿ ವ್ಯಯಿಸುತ್ತಿದೆ” ಎಂದರು.
ಹಿಂದಿನ ಸರ್ಕಾರಗಳು ದೇಶದ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡುವತ್ತ ಗಮನಹರಿಸಿದ್ದರೆ ಈಗ ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿರಲಿಲ್ಲ ಎಂದು ಮೋದಿ ಹೇಳಿದ್ದಾರೆ.
- Advertisement -