- Advertisement -
- Advertisement -


ಬಂಟ್ವಾಳ: ಹಿಟ್ ಆಂಡ್ ರನ್ ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರೀಮಿಯರ್ ಸೆಕ್ಯೂರಿಟಿ ಸರ್ವಿಸಸ್ ಸಂಸ್ಥೆಯ ಸಿಬ್ಬಂದಿ ಚಿದಾನಂದ ಕಾಮತ್ ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಬಂಟ್ವಾಳ ಆಸ್ಪತ್ರೆಗೆ ರವಾನಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -