


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಸಂಚುಕೋರ ಎನ್ನಲಾದ ಅಮನ್ ಸಿಂಗ್ನ್ನು ಜಾರ್ಖಂಡ್ನ ಧನ್ಬಾದ್ನಲ್ಲಿ ಕೇಂದ್ರೀಯ ತನಿಖಾ ದಳ (CBI) ಬುಧವಾರ ಬಂಧಿಸಿದೆ.
ನೀಟ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಇಲ್ಲಿವರೆಗೆ ಏಳು ಮಂದಿಯನ್ನು ಬಂಧಿಸಿದೆ. ಭಾನುವಾರ, ಸಿಬಿಐ ಗುಜರಾತ್ನ ಗೋದ್ರಾ ಜಿಲ್ಲೆಯ ಖಾಸಗಿ ಶಾಲೆಯೊಂದರ ಮಾಲೀಕರನ್ನು ಬಂಧಿಸಿತ್ತು. ಇದು ಪ್ರಕರಣದಲ್ಲಿ ಆರನೇ ಬಂಧನವಾಗಿದೆ. ಪಂಚಮಹಲ್ ಜಿಲ್ಲೆಯ ಗೋಧ್ರಾ ಬಳಿಯಿರುವ ಜೈ ಜಲರಾಮ್ ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್, ಅಭ್ಯರ್ಥಿಗಳ ಪರೀಕ್ಷೆಯಲ್ಲಿ ಅಂಕಗಳನ್ನು ಹೆಚ್ಚಿಸುವ ಭರವಸೆ ನೀಡಿ 5 ಲಕ್ಷದಿಂದ 10 ಲಕ್ಷದವರೆಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧಿಸಲಾಗಿದೆ. ಪಂಚಮಹಲ್ ಜಿಲ್ಲೆಯ ಗೋದ್ರಾ ಬಳಿ ಇರುವ ಜೈ ಜಲರಾಮ್ ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿದೆ.
ಜೂನ್ 29 ರಂದು, ಹಜಾರಿಬಾಗ್ನಲ್ಲಿ ಹಿಂದಿ ಮಾಧ್ಯಮ ಸಂಸ್ಥೆಯೊಂದರ ಮಾರ್ಕೆಟಿಂಗ್ ವೃತ್ತಿಪರ ಜಮಾಲುದ್ದೀನ್ ಅನ್ಸಾರಿ ಎಂಬಾತನನ್ನು ಸಿಬಿಐ ಬಂಧಿಸಿತ್ತು. ಏಜೆನ್ಸಿ ಅಧಿಕಾರಿಗಳು ಓಯಸಿಸ್ ಶಾಲೆಯ ಪ್ರಾಂಶುಪಾಲ ಎಹ್ಸಾನುಲ್ ಹಕ್ ಮತ್ತು ಉಪ ಪ್ರಾಂಶುಪಾಲ ಇಮ್ತಿಯಾಜ್ ಆಲಂ ಅವರನ್ನು ಬಂಧಿಸಿದ ಮರುದಿನವೇ ಈ ಬಂಧನ ನಡೆದಿದೆ. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಗಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ನಗರ ಸಂಯೋಜಕರಾಗಿ ಹಕ್ ಅವರನ್ನು ನೇಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 5 ರಂದು ನೀಟ್ ಪರೀಕ್ಷೆಯನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಕ್ರಮಗಳ ಆರೋಪದ ಮೇಲೆ ಟೀಕೆಗಳನ್ನು ಎದುರಿಸುತ್ತಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದು ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳು ಅನ್ನು ವಿಸರ್ಜಿಸಲು ಒತ್ತಾಯಿಸಿದ್ದಾರೆ.