ನೆಲ್ಯಾಡಿ: ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ನಡೆದಿದೆ.
ಮೃತಪಟ್ಟ ವ್ಯಕ್ತಿ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ನಿವಾಸಿ ವಿನಯ್(36) ಎಂದು ಗುರುತಿಸಲಾಗಿದೆ.
ಸಣ್ಣಂಪಾಡಿ ನಿವಾಸಿ ಜೇಕಬ್ ಅವರ ಪುತ್ರ, ಎಲೆಕ್ನಿಷಿಯನ್ ಆಗಿದ್ದ ವಿನಯ್ ಅವರು ತನ್ನ ಬೈಕ್ನಲ್ಲಿ ಸಣ್ಣಂಪಾಡಿಯಿಂದ ಗೋಳಿತ್ತೊಟ್ಟು ಕಡೆಗೆ ಬರುತ್ತಿದ್ದ ವೇಳೆ ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಕೊಕ್ಕಡದ ರಜನೀಶ್ ಹಾಗೂ ಗಗನ್ ಎಂಬವರು ಹೋಗುತ್ತಿದ್ದ ಬೈಕ್ ನಡುವೆ ಗೋಳಿತ್ತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಡಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನಯ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.