- Advertisement -
- Advertisement -
ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮೆಹತೋ(35ವ) ಮೃತಪಟ್ಟ ದುರ್ದೈವಿ. ಇವರು ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದರು. ಇವರು ನ.1 ರಂದು ಸಂಜೆ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೌಕ್ರಾಡಿ ಗ್ರಾಪಂನ ಮುಂಭಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -