Friday, May 17, 2024
spot_imgspot_img
spot_imgspot_img

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ; ಸವಾರ ಗಂಭೀರ..!

- Advertisement -G L Acharya panikkar
- Advertisement -

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು ಬಲ್ಯ ಕ್ರಾಸ್‌ ಬಳಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ರಾತ್ರಿ ವೇಳೆ ಕೆಲಸ ಮುಗಿಸಿ ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಮನೆಗೆಂದು ಹೊಸಮಜಲು ಕಡೆಗೆ ಹೋಗುತ್ತಿದ್ದವರು ಹೊಸಮಜಲುನಲ್ಲಿ ಬಲಭಾಗದಲ್ಲಿರುವ ಬಲ್ಯ ಕ್ರಾಸ್ ರಸ್ತೆಗೆ ಹೋಗಲು ತಿರುಗಿಸುತ್ತಿದ್ದ ವೇಳೆ ಕುರಿಯಕೋಸ್ ಅವರು ನೆಲ್ಯಾಡಿಯಿಂದ ಪೆರಿಯಶಾಂತಿ ಕಡೆಗೆ ಬೈಕ್ ನಲ್ಲಿ ಚತುಷ್ಪಥ ಹೆದ್ದಾರಿಯ ಬಲಭಾಗದ ಪಥದಲ್ಲಿ ಬಂದು ಡಿಕ್ಕಿಯಾಗಿದ್ದಾರೆ.

ಘಟನೆಯಲ್ಲಿ ದಿನೇಶ ಶೆಟ್ಟಿಯವರು ಗಂಭೀರ ಗಾಯಗೊಂಡಿದ್ದು ಅವರಿಗೆ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾಗಿರುವ ಬೈಕ್ ಸವಾರ ಕುರಿಯಾಕೋಸ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕುರಿಯಾಕೋಸ್ ಅವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ ಈ ಅಪಘಾತ ನಡೆದಿದೆ ಎಂದು ದೋಂತಿಲ ನಿವಾಸಿ ಮಹಾಬಲ ಶೆಟ್ಟಿ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

Related news

error: Content is protected !!