Saturday, May 4, 2024
spot_imgspot_img
spot_imgspot_img

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!

- Advertisement -G L Acharya panikkar
- Advertisement -

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ.

ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್ ಅವರು ನಾಪತ್ತೆಯಾಗಿದ್ದರು. ಅವರ ಬೈಕ್‌ ಉದನೆ ಸಮೀಪ ಗುಂಡ್ಯ ಹೊಳೆಬದಿಯ ಕಡೆಂಬಿಲ ಎಂಬಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆ.15ರಂದು ಸಂಜೆ ತನಕ ಅಗ್ನಿಶಾಮಕ ಹಾಗೂ ಧರ್ಮಸ್ಥಳ ಶೌರ್ಯ ತಂಡದ ಸದಸ್ಯರು ಗುಂಡ್ಯ ಹೊಳೆಯಲ್ಲಿ ಹುಡುಕಾಟ ನಡೆಸಿದ್ದರು. ಆ.16ರಂದು ಬೆಳಗಿನಿಂದಲೇ ಗುಂಡ್ಯ ಹೊಳೆಯಲ್ಲಿ ಹುಡುಕಾಟ ನಡೆಸಲಾಗಿದ್ದು ಮಧ್ಯಾಹ್ನದ ವೇಳೆಗೆ ನದಿ ನೀರಿನಲ್ಲಿ ಲೋಕೇಶ್ ಅವರ ಮೃತ ದೇಹ ಪತ್ತೆಯಾಗಿದೆ.

Insta: glacharyajewellers
Fb: glacharya
- Advertisement -

Related news

error: Content is protected !!