Friday, April 19, 2024
spot_imgspot_img
spot_imgspot_img

ನೆಲ್ಯಾಡಿ: ಸೈನಿಕರೊಬ್ಬರ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ದಾಂಧಲೆ: ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ!

- Advertisement -G L Acharya panikkar
- Advertisement -

ನೆಲ್ಯಾಡಿ: ಮುಸ್ಲಿಂ ಯುವಕರ ಗುಂಪೊಂದು ನೆಲ್ಯಾಡಿ ಕಟ್ಟೆಮಜಲು ನಿವಾಸಿ, ಸೈನಿಕ ನಾಗೇಶ್ ಎಂಬವರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದೆ.

ನೆಲ್ಯಾಡಿ ಕಟ್ಟೆಮಜಲು ನಿವಾಸಿ, ಭಾರತೀಯ ಸೇನೆಯಲ್ಲಿ ಸೈನಿಕರಾಗಿರುವ ನಾಗೇಶ್ ಕಟ್ಟೆಮಜಲು ಅವರ ಕಾರಿಗೆ ಮುಸ್ಲಿಂ ವ್ಯಕ್ತಿಯೋರ್ವರ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ಅವರೊಳಗೆ ಮಾತಿನ ಚಕಮಕಿಯೂ ನಡೆದಿತ್ತು.

ಬಳಿಕ ನಾಗೇಶ್ ರವರು ಮನೆಗೆ ಬಂದ ಬಳಿಕ ಅವರ ಮನೆಗೆ ಬಂದ 30 ಕ್ಕೂ ಹೆಚ್ಚು ಮುಸ್ಲಿಂ ಯುವಕರ ಗುಂಪೊಂದು ನಾಗೇಶ್, ಅವರ ಪತ್ನಿ ಹಾಗೂ ಮನೆಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗುಂಪು ಚದುರಿಸಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ನಾಗೇಶ್ ಹಾಗೂ ಅವರ ಪತ್ನಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ಮನೆಗೆ ನುಗ್ಗಿ ವಸ್ತುಗಳನ್ನು ಚೆಲ್ಲಾಡಿ ದಾಂಧಲೆ ಎಬ್ಬಿಸಿದ್ದಾರೆ ಎನ್ನಲಾಗಿದೆ. ಸಕಾಲದಲ್ಲಿ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿದ ಬಳಿಕ ಮುಸ್ಲಿಮ್ ಹುಡುಗರ ಗುಂಪು ಅಲ್ಲಿಂದ ಚದುರಿ ಓಡಿಹೋಗಿದೆ. ದುಷ್ಕರ್ಮಿಗಳ ತಂಡದಲ್ಲಿ ರೌಡಿಶೀಟರ್ ಗಳಾದ ನೆಲ್ಯಾಡಿಯ ಮತ್ತು ಕೊಕ್ಕಡದ ವ್ಯಕ್ತಿಗಳು ಇದ್ದರು.

driving
- Advertisement -

Related news

error: Content is protected !!