- Advertisement -
- Advertisement -


ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ ಘಟನೆ ನಡೆದಿದೆ.
ಮೃತಪಟ್ಟ ಯುವಕ ಕುಂಬ್ರ ನಿವಾಸಿ ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್ (26) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟಿದ್ದಾರೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಇವರನ್ನು ಒಳಗೊಂಡ ಸ್ನೇಹಿತರ ತಂಡ 5 ಕಾರುಗಳಲ್ಲಿ ಶಿರಾಡಿ ಗಡಿ ದೇವಸ್ಥಾನಕ್ಕೆ ಹೋಗಿದ್ದು, ಪೂಜೆ ಮುಗಿಸಿ ಹಿಂತಿರುಗಿ ಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -