Sunday, June 29, 2025
spot_imgspot_img
spot_imgspot_img

ನೆಲ್ಯಾಡಿ: ತಂದೆಯ ಮರಣದ ಚಿಂತೆ; ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ನೆಲ್ಯಾಡಿ: ಮೂರು ವರ್ಷದ ಹಿಂದೆ ನಡೆದ ತಂದೆಯ ಮರಣದ ಚಿಂತೆಯಲ್ಲಿದ್ದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅನಾಲು ನಿವಾಸಿ ದಿ.ವಾಸಪ್ಪ ಗೌಡರವರ ಪುತ್ರ ಶ್ರೀ ಹರ್ಷ ಗೌಡ (21) ಎಂದು ಗುರುತಿಸಲಾಗಿದೆ.

ಈತ ಮೇ.4ರಂದು ರಾತ್ರಿ ಮನೆ ಸಮೀಪ ಚಿಕ್ಕಪ್ಪ ಶೀನಪ್ಪ ಗೌಡರವರ ಮಗಳ ಮದುವೆ ಔತಣ ಕೂಟವಿದ್ದ ಹಿನ್ನೆಲೆಯಲ್ಲಿ ಸಂಜೆಯ ತನಕ ಅಲ್ಲಿ ಕೆಲಸ ಮಾಡಿ ವಾಪಾಸು ಮನೆಗೆ ಬಂದು ಹಂದಿಗೆ ಹಾಕಲು ವೆಸ್ಟೇಜ್‌ನ್ನು ಗೋಳಿತೊಟ್ಟುವಿಗೆ ಹೋಗಿ ಅಲ್ಲಿಂದ ಮನೆಗೆ ತಂದು ಚೌತಣ ಕೂಟಕ್ಕೆ ಹೋಗದೇ ಮನೆಯಲ್ಲಿಯೇ ಇದ್ದರು. ಈತನ ಸಹೋದರ ಹರ್ಷ ಮೇ.5ರಂದು ಬೆಳಗಿನ ಜಾವ 2.30 ಗಂಟೆಗೆ ಮನೆಗೆ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಒಳಗೆ ಹೋಗಿ ನೋಡಿದಾಗ ಹಂಚು ಛಾವಣಿಯ ಮನೆಯ ಮಾಡಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ನೇತಾಡುತ್ತಿರುವುದು ಕಂಡು ಬಂದಿದೆ.

ಕೂಡಲೇ ನೈಲಾನ್ ಹಗ್ಗವನ್ನು ತುಂಡರಿಸಿ ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಬೆಳಿಗ್ಗೆ 3.30ಗಂಟೆಗೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಶ್ರೀಹರ್ಷನ ತಂದೆ 3 ವರ್ಷದ ಹಿಂದೆ ಮೃತಪಟ್ಟಿದ್ದು ಅಂದಿನಿಂದ ತಂದೆಯವರ ಮರಣದ ಬಗ್ಗೆ ಚಿಂತೆಯಲ್ಲಿದ್ದವನು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಣ್ಣ ಹರ್ಷಿತ್ ಗೌಡ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೃತ ಶ್ರೀಹರ್ಷ ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!