- Advertisement -
- Advertisement -
ಬೆಂಗಳೂರು: ಒಂದಿಷ್ಟು ಟೀಕೆಗಳು ವ್ಯಕ್ತವಾದ ಬಳಿಕ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನ ಜಾರಿಗೂ ಮುನ್ನವೇ ವಾಪಸ್ ಪಡೆದುಕೊಂಡಿದೆ.
ಲಂಡನ್ನಲ್ಲಿ ಕಾಣಿಸಿಕೊಂಡ ರೂಪಾಂತರ ಕೊರೊನಾ ಆತಂಕ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮಧ್ಯರಾತ್ರಿಯಿಂದ ಜನವರಿ 2ರ ಬೆಳಗ್ಗೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ಹಲವರಿಂದ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರ ನೈಟ್ಕರ್ಫ್ಯೂ ಜಾರಿಗೂ ಮುನ್ನವೇ ವಾಪಸ್ ಪಡೆದುಕೊಂಡಿದ್ದು, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
- Advertisement -