Saturday, June 28, 2025
spot_imgspot_img
spot_imgspot_img

ಅಮಾಯಕರನ್ನು ಬಂಧಿಸಿಲ್ಲ: ಕಮಿಷನರ್ ಕಮಲ್ ಪಂತ್

- Advertisement -
- Advertisement -

ಬೆಂಗಳೂರು: ನಾವು ಅಮಾಯಕರನ್ನು ಬಂಧಿಸಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕೆಲ ನಾಯಕರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ಕಾನೂನು ಪ್ರಕಾರ ನಾವು ಏನು ಮಾಡಬೇಕೋ ಅದನ್ನು ಮಾಡಿದ್ದೇವೆ. ಇಂದು ಕರ್ಫ್ಯೂ ತೆರವು ಆದ ಮೇಲೆ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ನೋಡಲು ಬಂದಿದ್ದೆ, ತನಿಖೆ ನಡೆಯುತ್ತಿದೆ. ಮುಂದೇನು ಅನ್ನೋದನ್ನು ಚರ್ಚೆ ಮಾಡಿದ್ದೇವೆ. ನಮಗೆ ಯಾವುದೇ ರೀತಿಯಲ್ಲಿ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದರು.

ಶಾಂತಿ ಸಭೆ ನಡೆಸುತ್ತಿದ್ದೇವೆ. ತನಿಖೆ ನಡೆಯುತ್ತಿರುವ ಕಾರಣ ಕೆಲ ಮಾಹಿತಿಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೇಳುತ್ತೇವೆ. ನಾವು ಯಾವ ಅಮಾಯಕರನ್ನು ಅರೆಸ್ಟ್ ಮಾಡಿಲ್ಲ. ಯಾರೇ ಬಂದರೂ ಸೂಕ್ತ ಮಾಹಿತಿ ಕೊಡುತ್ತೇವೆ. ಕಾನೂನು ಪ್ರಕಾರ ಏನು ಆಗುತ್ತದೆಯೂ ಅದು ಆಗುತ್ತದೆ ಎಂದು ಹೇಳಿದ್ರು.

- Advertisement -

Related news

error: Content is protected !!