Wednesday, April 24, 2024
spot_imgspot_img
spot_imgspot_img

ಮಂಗಳೂರು : ದ.ಕ.ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಪ್ರತಿಭಟನೆ

- Advertisement -G L Acharya panikkar
- Advertisement -


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಬಸ್ ಪಾಸ್ ಅವ್ಯವಸ್ಥೆ ಹಾಗೂ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷರಾದ ಸವಾದ್ ಸುಳ್ಯ ಪ್ರಸ್ತುತ ಬಸ್ ಪಾಸ್ ಅನ್ನು ಸೇವಾ ಸಿಂಧು ಆ್ಯಪ್ ಮುಖಾಂತರ ನೀಡುವುದರಿಂದ ವಿದ್ಯಾರ್ಥಿಗಳು ಕಷ್ಟ ಅನುಭವಿಸುವಂತಾಗಿದೆ ಈ ಹಿಂದಿನಂತೆ ನೀಡುತ್ತಿದ್ದ ಹಾಗೆ ಬಸ್ ಪಾಸ್ ಅನ್ನು ವಿತರಿಸಬೇಕು ಹಾಗೂ ಸಿದ್ಧರಾಮಯ್ಯ ಸರ್ಕಾರವಿದ್ದಾಗ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಉಚಿತ ಬಸ್ ಪಾಸ್ ಯೋಜನೆಯನ್ನು ಮರು ನಿಯೋಜನೆಗೊಳಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಎನ್.ಎಸ್.ಯು.ಐ ನ ಕಾರ್ಯದರ್ಶಿ ಫಾರೂಕ್ ಬಯಾಬೆ ಪ್ರಸ್ತುತ ಬಸ್ ಪಾಸ್ ಅವ್ಯವಸ್ಥೆಯಿಂದ ಅನೇಕ ವಿದ್ಯಾರ್ಥಿಗಳು ಕಷ್ಟ ಅನುಭವಿಸುವಂತಾಗಿದೆ ಹಾಗೂ ಅಲ್ಪಸಂಖ್ಯಾತರು,ದಲಿತರು ಹಾಗೂ ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ನ ರಾಷ್ಟ್ರೀಯ ಸಂಯೋಜಕ ಅನ್ವಿತ್ ಕಟೀಲ್, ಶೌನಕ್ ರೈ ,ಶೇಖ್ ಅಫ್ಶನ್,ಕೌಶಿಕ್ ಗೌಡ,ಆಶಿಕ್ ಅರಂತೋಡು,ಶಫೀಕ್,ಅಂಕುಶ್ ಶೆಟ್ಟಿ, ಪ್ರಿಸ್ಟನ್,ರಾಝಿ ಹಾಗೂ ಇನ್ನಿತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!