ಹಾಸನ: ಸಂಸದ ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್ಡಿ ರೇವಣ್ಣ ಅವರು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆಯೇ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮತ್ತೆ ದೂರು ನೀಡಲು ಮೂವರು ಸಂತ್ರಸ್ತೆಯರು ಎಸ್ಐಟಿಯನ್ನು ಸಂಪರ್ಕಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಎಸ್ಐಟಿ ಅಧಿಕಾರಿಗಳು ಸದ್ಯ ಮೂವರು ಮಹಿಳೆಯರ ಪೂರ್ವಾಪರಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಜಕ್ಕೂ ಸಂತ್ರಸ್ತೆಯರ ಅಥವಾ ಸುಳ್ಳು ದೂರು ನೀಡಲು ಬಂದಿದ್ದಾರಾ, ಜೊತೆಗೆ ಆರೋಪಕ್ಕೆ ಪೂರಕವಾದ ಸಾಕ್ಷಿಗಳು ಏನಾದರೂ ಇದೆಯಾ ಎಂಬ ಬಗ್ಗೆಯೂ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರಂತೆ. ಒಂದು ವೇಳೆ ಎಸ್ ಐ ಟಿ ಪರಿಶೀಲನೆ ವೇಳೆ ಸತ್ಯಾಂಶ ಕಂಡು ಬಂದಲ್ಲಿ ಮತ್ತೆ ಮೂವರು ಪ್ರತ್ಯೇಕ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೂರು ದಾಖಲಿಸಿ ಮತ್ತೆ ಎಫ್ ಐ ಆರ್ ಗಳನ್ನು ದಾಖಲಿಸುವ ಸಾಧ್ಯತೆ ಇದ್ದು, ಹೀಗಾಗಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟ ಹೆಚ್ಚಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.