- Advertisement -
- Advertisement -
ಬೆಂಗಳೂರು: ಅಕ್ಟೋಬರ್ ನಲ್ಲಿ ಶಾಲಾ-ಕಾಲೇಜು ತೆರೆಯಲು ಚಿಂತನೆ ನಡೆಸಲಾಗಿದೆ.ಆದರೆ ಕೇಂದ್ರ ಸರ್ಕಾರದ ಮಾರ್ಗಸೂಚಿಗೆ ಕಾಯುತ್ತಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರಸ್ತುತ ದ್ವಿತೀಯ ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ತೆರೆಯುವುದು ಅವಶ್ಯವಿದೆ. ಈಗ ನಾವು ಆಗಸ್ಟ್ ಅಂತ್ಯದಲ್ಲಿದ್ದೇವೆ. ಸೆಪ್ಟೆಂಬರ್ ಶಾಲಾ-ಕಾಲೆಜು ತೆರೆಯುವುದಿಲ್ಲ. ಆದರೆ ಅಕ್ಟೋಬರ್ ತಿಂಗಳಲ್ಲಿ ಶಾಲಾ-ಕಾಲೇಜು ತೆರೆಯಲು ಚಿಂತನೆ ನಡೆಸಲಾಗಿದೆ .ಕೇಂದ್ರ ಸರ್ಕಾರ ಶಾಲಾ-ಕಾಲೇಜು ಆರಂಭದ ಬಗ್ಗೆ ಮಾರ್ಗಸೂಚಿ ಹೊರಡಿಸಿದರೆ ಅಕ್ಟೋಬರ್ ತಿಂಗಳಿನಿಂದ ತೆರೆಯುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದರು.
- Advertisement -