Saturday, May 4, 2024
spot_imgspot_img
spot_imgspot_img

ಪತಿ ತೀರಿಕೊಂಡ ದಿನವೇ, ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ಮಹಿಳೆ

- Advertisement -G L Acharya panikkar
- Advertisement -

ಕಳೆದ ಎರಡು ವರ್ಷಗಳ ಹಿಂದೆ ಪತಿ ತೀರಿಕೊಂಡ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಹಿಳೆ ಗಂಡನ ಪುಣ್ಯತಿಥಿ ದಿನವೇ ತನ್ನ ಮಗುವಿನೊಂದಿಗೆ ಕರೆಗೆ ಹಾರಿ ಸಾವಿಗೆ ಶರಣಾಗಿರುವ ಕರುಣಾಜನಕ ಘಟನೆ ಬೆಂಗಳೂರಿನ ಹೊರವಲಯ ಸಕಲವಾರ ಕೆರೆಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಸಕಲವಾರ ಕೆರೆಗೆ ಮಗುವನ್ನ ಸೊಂಟಕ್ಕೆ ಕಟ್ಟಕೊಂಡು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ತಾಯಿ ವಿಜಯಲಕ್ಷ್ಮಿ (35) ಹಾಗೂ ಪುತ್ರ ಹರಿಹರನ್ (7) ಎಂದು ಗುರುತಿಸಲಾಗಿದೆ. ಇವರು ಸಿ.ಕೆ. ಪಾಳ್ಯದಲ್ಲಿ ವಾಸವಾಗಿದ್ದರು. ಕಳೆದ ಎರಡು ವರ್ಷಗಳಿಂದ ಗಂಡನಿಲ್ಲದೇ ಮಗುವಿನೊಂದಿಗೆ ವಾಸವಾಗಿದ್ದ ಮಹಿಳೆ ಮನನೊಂದು, ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ್ದಾಳೆ.

ಇವರು ಆಂಧ್ರ ಪ್ರದೇಶ ಮೂಲದವರಾಗಿದ್ದು, ಕುಟುಂಬ ಸಮೇತವಾಗಿ ಕೆಲವು ವರ್ಷಗಳ ಹಿಂದೆ ದುಡಿಮೆಗಾಗಿ ಬೆಂಗಳೂರಿಗೆ ಬಂದಿದ್ದು, ಸಿ.ಕೆ. ಪಾಳ್ಯದಲ್ಲಿ ವಾಸವಿದ್ದರು. 2 ವರ್ಷದ ಹಿಂದೆ ನಡೆದ ಅಪಘಾತದಲ್ಲಿ ವಿಜಯಲಕ್ಷ್ಮೀ ಅವರ ಪತಿ ತೀರಿಕೊಂಡಿದ್ದರು. ಇದಾದ ಬಳಿಕ ವಿಜಯಲಕ್ಷ್ಮೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಪತಿ ತೀರಿಕೊಂಡು ಇಂದಿಗೆ ಸರಿಯಾಗಿ 2 ವರ್ಷ ಕಳೆದಿವೆ. ಇದೀಗ ಪತಿ ತೀರಿಕೊಂಡ ದಿನವೇ ಮಗುವಿನ ಜತೆಗೆ ವಿಜಯಲಕ್ಷ್ಮೀ ಸಾವಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಹೊರತೆಗೆಯಲಾಗಿದೆ.

- Advertisement -

Related news

error: Content is protected !!