Friday, May 3, 2024
spot_imgspot_img
spot_imgspot_img

ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ವರ್ಷದ ಮಗು ಸಾವು

- Advertisement -G L Acharya panikkar
- Advertisement -

ವೈದ್ಯರ ನಿರ್ಲಕ್ಷ್ಯ ಆರೋಪ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕುವೆಂಪು ನಗರದಲ್ಲಿರುವ ವಂಶೋದಯ ಆಸ್ಪತ್ರೆಯಲ್ಲಿ ನಡೆದಿದೆ.
ಕೋಲಾರ ತಾಲ್ಲೂಕಿನ ವಾನರಾಶಿ ಗ್ರಾಮದ ಆಂಜನಪ್ಪ ಹಾಗೂ ಮೌನಿಕಾ ದಂಪತಿಯ ಮಗು ವಿಹಾನ್ ಸಾವನ್ನಪ್ಪಿದೆ.

ವಿಹಾನ್​ನನ್ನು ಪೋಷಕರು ಮೂರ್ಛೆ ಕಾಯಿಲೆ ಎಂದು ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಪೋಷಕರು ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸುತ್ತಿದ್ದಾರೆ. ಹೀಗಾಗಿ ದಲಿತ ಮುಖಂಡರೊಂದಿಗೆ ಪೋಷಕರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.

ಮಗುವಿನ ಮೃತ ಶವ ಪಡೆಯದೆ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಂಶೋದಯ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ದ ಆಕ್ರೋಶ ಹೊರಹಾಕುತ್ತಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!