Saturday, June 28, 2025
spot_imgspot_img
spot_imgspot_img

ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಸಾವು; 29 ಮಕ್ಕಳು ಅಸ್ವಸ್ಥ..!

- Advertisement -
- Advertisement -

ಮಂಡ್ಯ: ಫುಡ್ ಪಾಯಿಸನ್‌ಗೆ ಓರ್ವ ವಿದ್ಯಾರ್ಥಿ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಎಂದು ಗುರುತಿಸಲಾಗಿದೆ. ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದರು. ಉಳಿದ ಊಟವನ್ನ ತಂದು ಮಕ್ಕಳಿಗೆ ನೀಡಲಾಗಿತ್ತು.

ಊಟ ಸೇವಿಸಿದ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಶನಿವಾರ ಏರುಪೇರಾಗಿತ್ತು. ಆದರೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸೇರಿಸದೇ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿತ್ತು. ಶನಿವಾರ ರಾತ್ರಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು (ಭಾನುವಾರ) ಬೆಳಗ್ಗೆ ಬಾಲಕ ಮೃತಪಟ್ಟಿದ್ದು, ಅಸ್ವಸ್ಥಗೊಂಡ ಮಕ್ಕಳನ್ನ ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿತ್ತು.

ಅಸ್ವಸ್ಥ 27 ವಿದ್ಯಾರ್ಥಿಗಳಿಗೆ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದ್ದು, ಐವರನ್ನ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಓ ಮೋಹನ್ ಭೇಟಿ ನೀಡಿ, ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ವಾಡಿಗಳು ಹೋಳಿ ಹಬ್ಬ ಪ್ರಯುಕ್ತ ಶುಕ್ರವಾರ ರಾತ್ರಿ ಊಟ ಮಾಡಿಸಿದ್ದರು. ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೂ ಅದೇ ಊಟ ವಿತರಿಸಲಾಗಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಶುರುವಾಗಿದೆ. ವೈದ್ಯರು ಚಿಕಿತ್ಸೆ ನೀಡಿ ಬಂದಿದ್ದರು. ಚೆನ್ನಾಗಿ ಓಡಾಡಿಕೊಂಡಿದ್ದ ವಿದ್ಯಾರ್ಥಿಯೊಬ್ಬ ಸಡನ್ ಆಗಿ ಡೆತ್ ಆಗಿದ್ದಾನೆ. ಪೋಸ್ಟ್ ಮಾರ್ಟಮ್‌ನಲ್ಲಿ ಸಾವಿಗೆ ಕಾರಣ ನಿಖರವಾಗಿ ಗೊತ್ತಾಗುತ್ತದೆ ಎಂದರು.

ಅಸ್ವಸ್ಥಗೊಂಡ ವಿದ್ಯಾರ್ಥಿಗಳಲ್ಲಿ 27 ಮಂದಿ ಹೊರರಾಜ್ಯದವರಾಗಿದ್ದಾರೆ. ಇಬ್ಬರು ಸ್ಥಳೀಯ ವಿದ್ಯಾರ್ಥಿಗಳಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲಾ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. ಹಬ್ಬದ ಊಟ ಮಾಡಿಸಿ, ಸೇವಿಸಿದ್ದ ಮಾರ್ವಾಡಿಗಳಿಗೂ ವಾಂತಿ, ಭೇದಿ ಆಗಿದೆ. ಅವರು ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

- Advertisement -

Related news

error: Content is protected !!