Saturday, April 27, 2024
spot_imgspot_img
spot_imgspot_img

ಕಡಬ : “ಆಪರೇಷನ್ ಚೀತಾ” ವಿಫಲ! – ತಪ್ಪಿಸಿಕೊಂಡ ಚಿರತೆ, ಆತಂಕದಲ್ಲಿ ಸ್ಥಳೀಯ ಜನತೆ

- Advertisement -G L Acharya panikkar
- Advertisement -

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯು ಕಾರ್ಯಾಚರಣೆ ವೇಳೆ ಓಡಿ ತಪ್ಪಿಸಿಕೊಂಡಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದರಿಂದ ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿತ್ತು.

ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದ್ದವು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾ ಅಧಿಕಾರಿಗಳು ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯ ವೇಳೆ ಚಿರತೆಯು ತಪ್ಪಿಸಿಕೊಂಡು ಕಾಡಿನತ್ತ ಓಡಿ ಪರಾರಿಯಾಗಿದೆ.

- Advertisement -

Related news

error: Content is protected !!