Sunday, June 29, 2025
spot_imgspot_img
spot_imgspot_img

ಪೋಷಕರಿಂದ ಪ್ರೀತಿಗೆ ವಿರೋಧ; ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ..!

- Advertisement -
- Advertisement -

ಬೆಂಗಳೂರು: ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನೈಸ್ ರಸ್ತೆ ಸಮೀಪ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (25) ಎಂದು ಗುರುತಿಸಲಾಗಿದೆ.

ಇಬ್ಬರು ಕಳೆದ ಕೆಲ ವರ್ಷದಿಂದ ಪರಸ್ಪರ ಪ್ರೀತಿಸ್ತಿದ್ದರು. ಆದರೆ ಇದೇ ಜುಲೈ 1 ರಂದು ನಾಪತ್ತೆಯಾಗಿದ್ದರು. ವಿದ್ಯಾರ್ಥಿನಿ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರದಲ್ಲಿ ವಾಸವಿದ್ದಳು. ಶ್ರೀಕಾಂತ್​ ಕೋಣನಕುಂಟೆ ನಿವಾಸಿಯಾಗಿದ್ದನು. ಯುವ ಜೋಡಿಯ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಜುಲೈ 1 ರಂದು ನಾಪತ್ತೆಯಾಗಿದ್ದರು.

ನಾಪತ್ತೆ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೀಗ ಶ್ರೀಕಾಂತ್​ ಮತ್ತು ಅಂಜನಾ ಮೃತದೇಹ ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.

- Advertisement -

Related news

error: Content is protected !!