Friday, April 26, 2024
spot_imgspot_img
spot_imgspot_img

ನಾಳೆಯ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ-ಹೈಕೋರ್ಟ್ !!

- Advertisement -G L Acharya panikkar
- Advertisement -

ಬೆಂಗಳೂರು: ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್ ಗೆ ಸಂಬಂಧಿಸಿದಂತೆ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಬಂದ್ ನಡೆಸುವಾಗ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ.

ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕು. ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು. ಸರ್ಕಾರ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಲೆಟ್ಸ್ ಕಿಟ್ ಫೌಂಡೇಶನ್, ಸಾಯಿದತ್ತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿ ಈ ತೀರ್ಪನ್ನು ನೀಡಿದೆ.

- Advertisement -

Related news

error: Content is protected !!