Saturday, April 20, 2024
spot_imgspot_img
spot_imgspot_img

OTT ಟಾಪರ್‌ ಆಗಿ ‘ಬಿಗ್​ ಬಾಸ್​ ಸೀಸನ್​ 9’ರಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದ ಕರಾವಳಿಯ ಕುವರ

- Advertisement -G L Acharya panikkar
- Advertisement -

42 ದಿನಗಳ ಕಾಲ ಎಲ್ಲರ ನಡುವೆ ಸಖತ್​ ಪೈಪೋಟಿಯಲ್ಲಿ ನಡೆದ ಬಿಗ್‌ಬಾಸ್‌ ಒಟಿಟಿ ಶೋ ಅಂತ್ಯಗೊಂಡಿದೆ. ಶುಕ್ರವಾರ ಅದ್ಧೂರಿಯಾಗಿ ಫಿನಾಲೆಯು ನಡೆಯಿತು. ಕಡೆಗೆ ನಾಲ್ಕು ಜನರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದಿದ್ದಾರೆ. ಆ ಪೈಕಿ ಕರಾವಳಿಯ ಕುವರ ರೂಪೇಶ್​ ಶೆಟ್ಟಿ ಅವರು ಟಾಪರ್​ ಆಗಿದ್ದಾರೆ. ಅವರಿಗೆ ಫಿನಾಲೆ ವೇದಿಕೆಯಲ್ಲಿ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು.

ಕೊನೆಯ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ಪರ್ಫಾರ್ಮೆನ್ಸ್​ ನೀಡುವ ಮೂಲಕ ರೂಪೇಶ್​ ಶೆಟ್ಟಿ ಅವರು ಈ ಬಹುಮಾನದ ಮೊತ್ತ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಅವರ ಜೊತೆಗೆ ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್​ ಹಾಗೂ ಆರ್ಯವರ್ಧನ್​ ಗುರೂಜಿ ಕೂಡ ಟಿವಿ ಸೀಸನ್​ಗೆ ನೇರ ಟಿಕೆಟ್​ ಪಡೆದುಕೊಂಡಿದ್ದಾರೆ.

ತಮ್ಮದೇ ರೀತಿಯಲ್ಲಿ ರೂಪೇಶ್​ ಶೆಟ್ಟಿ ಅವರು ಗುರುತಿಸಿಕೊಂಡಿದ್ದರು. ಸಾನ್ಯಾ ಐಯ್ಯರ್​ ಜೊತೆಗೆ ಅವರು ಹೆಚ್ಚು ಆಪ್ತವಾಗಿದ್ದರು. ದೊಡ್ಮನೆಯಲ್ಲಿ ಅವರು ಕಿರಿಕ್​ ಮಾಡಿಕೊಂಡಿದ್ದು ಕಡಿಮೆ. ಸಾಧ್ಯವಾದಷ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುಣ ಅವರದ್ದಾಗಿತ್ತು. ಈ ಎಲ್ಲ ಕಾರಣದಿಂದಾಗಿ ಅವರು ಜನಮನ ಗೆದ್ದಿದ್ದಾರೆ. ಹೆಚ್ಚು ವೋಟ್​ ಪಡೆಯುವ ಮೂಲಕ ಟಾಪರ್​ ಸ್ಥಾನ ಗಳಿಸಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ಸೆಪ್ಟೆಂಬರ್​ 24ರಿಂದ ಆರಂಭ ಆಗಲಿದೆ. ಅದನ್ನು ಕೂಡ ಕಿಚ್ಚ ಸುದೀಪ್​ ಅವರು ನಡೆಸಿಕೊಡಲಿದ್ದಾರೆ. ಬಿಗ್​ ಬಾಸ್​ ಕನ್ನಡ ಒಟಿಟಿ ಫಿನಾಲೆಯಲ್ಲಿ ಗೆದ್ದ ರೂಪೇಶ್​ ಶೆಟ್ಟಿ, ಸಾನ್ಯಾ ಐಯ್ಯರ್​, ಆರ್ಯವರ್ಧನ್​ ಗುರೂಜಿ ಹಾಗೂ ರಾಕೇಶ್​ ಅಡಿಗ ಜೊತೆಯಲ್ಲಿ ಹಳೇ ಸೀಸನ್​ನ 5 ಸ್ಪರ್ಧಿಗಳು ಕೂಡ 9ನೇ ಸೀಸನ್​ಗೆ ಎಂಟ್ರಿ ನೀಡಲಿದ್ದಾರೆ. ಅವರ ಜೊತೆ 9 ಹೊಸ ಸ್ಪರ್ಧಿಗಳಿಗೆ ಅವಕಾಶ ಸಿಗುತ್ತಿದೆ. ಅವರೆಲ್ಲರ ನಡುವೆ ರೂಪೇಶ್​ ಶೆಟ್ಟಿ ಅವರು ಯಾವ ರೀತಿ ಗುರುತಿಸಿಕೊಳ್ಳಲಿದ್ದಾರೆ ಎಂಬ ಕೌತುಕ ಮೂಡಿದೆ.

ನಟನಾಗಿ, ಆರ್​ಜೆ ಆಗಿ ರೂಪೇಶ್​ ಶೆಟ್ಟಿ ಫೇಮಸ್​ ಹೊಂದಿದ್ದ ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋಗೆ ಬಂದ ಬಳಿಕ ಅವರಿಗೆ ಇನ್ನಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು 5 ಲಕ್ಷ ರೂಪಾಯಿ ಬಹುಮಾನ ಮೊತ್ತ ಪಡೆದು ಬೀಗಿದ್ದಾರೆ.

- Advertisement -

Related news

error: Content is protected !!