ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ 3 ನೇ ಅಲೆಯ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.
ಅದ್ರಲ್ಲೂ ಪಿಎಂ ಕೇರ್ಸ್ ಫಂಡ್ನ ಸಹಾಯದಿಂದ ದೇಶಾದ್ಯಂತೆ 850 ಆಮ್ಲಜನಕ ಪ್ಲಾಂಟ್ಗಳನ್ನು ನಿರ್ಮಾಣ ಆರಂಭವಾಗುತ್ತಿದೆ.ಹೌದು, ಪಿಎಂ ಕೇರ್ಸ್ ಫಂಡ್ನಿಂದ ವಿವಿಧ ಜಿಲ್ಲೆಗಳಲ್ಲಿ 850 ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸಲಾಗುತ್ತಿದೆ ಅಂತ ಡಿಆರ್ಡಿಒ ಚೇರ್ಮನ್ ಸಿ. ಸತೀಶ್ ರೆಡ್ಡಿ ಹೇಳಿದ್ದಾರೆ.
ಸತೀಶ್ ರೆಡ್ಡಿ, ಡಿಆರ್ಡಿಓ ಚೇರ್ಮನ್ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾದ ಹಿನ್ನೆಲೆ ಮೆಡಿಕಲ್ ಆಕ್ಸಿಜನ್ನ ಅಭಾವ ಉಂಟಾಗಿತ್ತು. ಹೀಗಾಗಿ ಪಿಎಂ ಕೇರ್ಸ್ ಅಡಿ ಆಕ್ಸಿಜನ್ ಪ್ಲಾಂಟ್ಗಳನ್ನ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.
ಈ ಬಗ್ಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ಆಜಾದಿ ಕಾ ಅಮೃತ್ ಮಹೋತ್ಸವ್ ಪ್ರವಚನ ಸರಣಿ’ಯ ಸಂದರ್ಭದಲ್ಲಿ ಮಾತನಾಡಿದ ಸತೀಶ್ ರೆಡ್ಡಿ, ಕೊರೊನಾವೈರಸ್ ವಿರುದ್ಧ ಹೋರಾಟದಲ್ಲಿ ಅಗತ್ಯ ಬಿದ್ದರೆ ಹೆಚ್ಚಿನ ಫ್ಲೈಯಿಂಗ್ ಆಸ್ಪತ್ರೆ ಸೇರಿದಂತೆ ಎಲ್ಲಾ ರೀತಿಯ ಸಪೋರ್ಟ್ ಒದಗಿಸಲು ಡಿಆರ್ಡಿಓ ಸಿದ್ದವಾಗಿದೆ ಎಂದು ಹೇಳಿದ್ದಾಗಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾವು ಹಲವಾರು ನಗರಗಳಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆಂದೇ ನಿಗದಿತ ಆಸ್ಪತ್ರೆಗಳನ್ನ ಸ್ಥಾಪನೆ ಮಾಡಿದ್ದೇವೆ. ಇವು ಮಾಡ್ಯುಲರ್ ಆಸ್ಪತ್ರೆಗಳು, ಇವನ್ನು ಫ್ಲೈಯಿಂಗ್ ಆಸ್ಪತ್ರೆಗಳೆಂದು ಕರೆಯುತ್ತೇವೆ. ವೈರಸ್ ಆಸ್ಪತ್ರೆಯಿಂದ ಹೊರಗಡೆ ಹೋಗದಂಥ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.