- Advertisement -
- Advertisement -
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ ಕಾರ್ಮಿಕ ಸಚಿವ ಜಾಕೀರ್ ಹುಸೇನ್ ಮೇಲೆ ಬಾಂಬ್ ದಾಳಿ ನಡೆದಿದೆ.
ದಾಳಿಯಲ್ಲಿ ಸಚಿವರು ಸೇರಿದಂತೆ ಹಲವರಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲ್ಕತ್ತಾಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಚಿವ ಜಾಕೀರ್ ಮೇಲೆ ದುಷ್ಕರ್ಮಿಗಳು ಕಚ್ಚಾ ಬಾಂಬ್ ದಾಳಿ ಮಾಡಿದ್ದಾರೆ.
ಮುರ್ಶಿದಾಬಾದ್ ನಲ್ಲಿ ಅತಿರೇಕದ ಹಸು ಕಳ್ಳಸಾಗಣೆಗೆ ವಿರುದ್ಧವಾಗಿ ಮಾತನಾಡಿದ ಕಾರಣ ಹುಸೇನ್ ಅವರನ್ನು ಗುರಿಯಾಗಿಸಿ ದಾಳಿ ಮಾಡಿರಬಹುದು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
- Advertisement -