Monday, June 30, 2025
spot_imgspot_img
spot_imgspot_img

ಪಡಿಬಾಗಿಲು: ದ ಕ ಜಿ ಪ ಹಿ ಪ್ರಾ ಶಾಲೆಯಲ್ಲಿ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಸರಕಾರದಿಂದ ಮಕ್ಕಳಿಗೆ ಕೊಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮ ದ ಕ ಜಿ ಪ ಹಿ ಪ್ರಾ ಶಾಲೆಪಡಿಬಾಗಿಲು ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಘವ ಮೈರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೇಪುಗ್ರಾಮ ಪಂಚಾಯತ್ ಸದಸ್ಯ ಜಗಜೀವನ್ ರಾಮ್ ಶೆಟ್ಟಿಯವರು ತಮ್ಮ ಕೊಡುಗೆಯಾಗಿ ಹೊಸದಾಗಿ ದಾಖಲಾದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲಿಯನ್ನು ನೀಡಿ ಸಹಕರಿಸಿದರು.

ವಿದ್ಯಾಸಿರಿ ಟ್ರಸ್ಟ್ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಅಡ್ಯನಡ್ಕ ಪ್ರಾಥಮಿಕ ಆರೋಗ್ಯಕೇಂದ್ರದ ಸಹಾಯಕಿ ಮಮತ ಸಿಸ್ಟರ್, ಆಶಾ ಕಾರ್ಯಕರ್ತೆ ರಮ್ಯಾ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಶಶಿಕಲಾ, ಜಲಜಾಕ್ಷಿ, ದುರ್ಗಮ್ಮ, ಸರಸ್ವತಿ,ಲೀಲಾ, ವಿಜಯಕುಮಾರ್,ಜ್ಯೋತಿ ಲಕ್ಷ್ಮಿ ಉಪಸ್ಥಿತರಿದ್ದರು,

ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಕೆ ರೈ ಸ್ವಾಗತಿಸಿ, ಜಯಶ್ರೀ ವಂದಿಸಿದರು, ಸಹಶಿಕ್ಷಕಿ ಲಲಿತ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!