Sunday, June 14, 2026
spot_imgspot_img
spot_imgspot_img

ಪಡುಬಿದ್ರಿ: ವ್ಯಕ್ತಿಯ ಜೀವ ಕಸಿದುಕೊಂಡ ಯಮಸ್ವರೂಪಿ ಲಾರಿ..! ದ್ವಿಚಕ್ರ ವಾಹನದ ಮೇಲೆ ಲಾರಿ ಮಗುಚಿಬಿದ್ದು ದುರ್ಘಟನೆ

- Advertisement -
- Advertisement -

ಪಡುಬಿದ್ರೆ : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಸವಾರ ಸಂಶುದ್ದೀನ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸದ್ಯ ಲಾರಿಯನ್ನು ಮೇಲಕ್ಕೆತ್ತುವ ಕಾರ್ಯ ಮಾಡಲಾಗುತ್ತಿದೆ.

ಸಂಶುದ್ದೀನ್ ಐಸ್ಕ್ಯಾಂಡಿ ವ್ಯಾಪಾರ ಮಾಡುತ್ತಿದ್ದು, ಮಳೆಗಾಲದಲ್ಲಿ ವ್ಯಾಪಾರ ಇಲ್ಲದ ಕಾರಣ ಮನೆಯಲ್ಲಿದ್ದರು. ಮಂಗಳವಾರ ಪಡುಬಿದ್ರಿಯ ಸಂತೆಯಲ್ಲಿ ತರಕಾರಿ ಖರೀದಿಸಿ ಕಂಚಿನಡ್ಕದ ಮನೆಯತ್ತ ತೆರಳುತಿದ್ದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!