- Advertisement -
- Advertisement -
ಪಣಂಬೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ವ್ಯಕ್ತಿಯೋರ್ವರ ಮೃತಹೇಹ ಪತ್ತೆಯಾದ ಘಟನೆ ಪಣಂಬೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು, ಬೋಳಾರ ಮುಳಿಹತ್ತು ನಿವಾಸಿ ಸುಲೈಮಾನ್ ಎಂಬವರ ಪುತ್ರ ಸರ್ಪರಾಝ್ ನವಾಝ್ (44) ಎಂಬವರ ಮೃತದೇಹ ಎಂದು ಪಣಂಬೂರು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತದೇಹವು ಸೋಮವಾರ ಮಧ್ಯಾಹ್ನ 1ಗಂಟೆಯ ಸುಮಾರಿಗೆ ಬೀಚ್ ನಲ್ಲಿ ಪತ್ತೆಯಾಗಿದ್ದು, ಬಳಿಕ ಅದನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -