Friday, June 27, 2025
spot_imgspot_img
spot_imgspot_img

ಚುನಾವಣೆಗೆ ಹಂಚಲು ಸಂಗ್ರಹಿಸಿದ್ದ 200 ಕುಕ್ಕರ್ ಗಳ ವಶ!

- Advertisement -
- Advertisement -

ಶಿವಮೊಗ್ಗ: ಚುನಾವಣೆಗೆ ಹಂಚಲು ಸಂಗ್ರಹಿಸಿದ್ದ 200 ಕುಕ್ಕರ್ ಗಳನ್ನ ಚುನಾವಣೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಚುನಾವಣೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹಿನ್ನಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದೆ.

ಬಿದರೆ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಧರ್ಮೇಂದ್ರ ಅವರ ತೋಟದ ಮನೆಯಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ 200 ಕ್ಕೂ ಹೆಚ್ಚು ಕುಕ್ಕರ್ ಗಳನ್ನ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಧರ್ಮೇಂದ್ರರವರು ಚುನಾವಣೆ ಅಭ್ಯರ್ಥಿಗಳಾಗಿದ್ದು, ಬಿದೆರೆ ಬಳಿಯ ತೋಟದಲ್ಲಿ ದಾಳಿ ನಡೆದಿದೆ. ಗ್ರಾಮಾಂತರ ಪೊಲೀಸರು ಮತ್ತು ಅಬಕಾರಿ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ದಾಳಿಯಲ್ಲಿ ಚುನಾವಣೆ ಅಧಿಕಾರಿ ಸಿ.ಚಂದ್ರಪ್ಪ, ಇಒ ಕಲ್ಲಣ್ಣ, ಭಾಗವಹಿಸಿದ್ದರು.

- Advertisement -

Related news

error: Content is protected !!