





ಡಿಸೆಂಬರ್ 13, 2023 ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣದ ಆರೋಪಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ಉಂಟು ಮಾಡಲು ಹಾಗೂ ಅಲ್ಪ ಸಮಯದಲ್ಲೇ ಜಾಗತಿಕವಾಗಿ ಖ್ಯಾತಿ ಪಡೆಯಲು ಪ್ರಯತ್ನಿಸಿದ್ದರು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
2023ರ ಡಿಸೆಂಬರ್ 13ರಂದು ನಡೆದಿದ್ದ ಪ್ರಕರಣದಲ್ಲಿ ಡಿ. ಮನೋರಂಜನ್, ಲಲಿತ್ ಝಾ, ಅಮೋಲ್ ಶಿಂದೆ, ಮಹೇಶ್ ಕುಮಾವತ್, ಸಾಗರ್ ಶರ್ಮಾ ಮತ್ತು ನೀಲಂ ಆಜಾದ್ ಅವರು ಆರೋಪಿಗಳಾಗಿದ್ದಾರೆ.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ಪರಿಣಾಮಕಾರಿಯಾಗಿಲ್ಲ ಮತ್ತು ಅದನ್ನು ಬದಲಾಯಿಸಬೇಕಾಗಿದೆ ಎಂಬ ಸಂದೇಶವನ್ನು ರವಾನಿಸಲು ಆರೋಪಿಗಳು ಬಯಸಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಪರಿಚಯವಾಗಿದ್ದ ಆರೋಪಿಗಳು, ತಮ್ಮ ಸಂಚನ್ನು ಕಾರ್ಯ ಗತಗೊಳಿಸಲು ಸುಮಾರು ಎರಡುವರ್ಷ ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ
ಮೊದಲ ಸಭೆಯನ್ನು 2022ರ ಫೆಬ್ರುವರಿಯಲ್ಲಿ ಮೈಸೂರಿನಲ್ಲಿ ನಡೆಸಿದ್ದರು ಎಂ ಬುದನ್ನು ಆರೋ ಪ ಪಟ್ಟಿಯಲ್ಲಿ ಉಲ್ಲೇ ಖಿಸಲಾಗಿದೆ. ಮೈಸೂರು, ಗುರುಗ್ರಾಮ ಮತ್ತು ದೆಹಲಿಯಲ್ಲಿ ಐದು ಸಭೆಗಳನ್ನು ನಡೆಸಿದ ಬಳಿಕ ಅವರು ಯೋಜನೆಯನ್ನು ಅಂತಿಮಗೊಳಿಸಿದ್ದರು . ಆರು ಆರೋಪಿಗಳ ವಿರುದ್ಧ ಪೊಲೀಸರು ಜೂನ್ 7ರಂದು ಸುಮಾರು 1000 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದರು. ಜುಲೈ ನಲ್ಲಿ ಹೆಚ್ಚುವರಿ ಆರೋ ಪ ಪಟ್ಟಿಯನ್ನೂ ಸಲ್ಲಿಸಿದ್ದರು.
ಸಂಸತ್ ಮೇಲಿನ ದಾಳಿ ಪ್ರಕರಣದ 22ನೇ ವಾರ್ಷಿ ಕೋತ್ಸವದ ವೇಳೆ ಸಾಗರ್ ಶರ್ಮಾ ಮತ್ತು ಮನೋ ರಂಜನ್ ಲೋಕಸಭೆಯ ಸದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದರು. ಘೋ ಷಣೆಗಳನ್ನು ಕೂಗುತ್ತಾ ಸ್ಮೋ ಕ್ ಕ್ಯಾನ್ ಹಾರಿಸಿ ದಾಂದಲೆ ಎಬ್ಬಿಸಿದ್ದರು. ಅದೇ ಸಮಯಕ್ಕೆ ಸಂಸತ್ ಭವನದ ಹೊರಗೆ ಅಮೋಲ್ ಶಿಂದೆ ಮತ್ತು ನೀಲಂ ಆಜಾದ್ ಬಣ್ಣದ ಹೊಗೆ ಹಾರಿಸಿ ಘೋಷಣೆ ಕೂಗಿದ್ದರು.