Saturday, April 20, 2024
spot_imgspot_img
spot_imgspot_img

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯಗೊಂಡಿದ್ದ ಬಿಜೆಪಿ ಸಂಸದೆಯ ಮೊಮ್ಮಗಳು ಸಾವು

- Advertisement -G L Acharya panikkar
- Advertisement -

ದೆಹಲಿ: ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಮಗು ಸಾವನ್ನಪ್ಪಿದೆ. ಬಿಜೆಪಿ ಸಂಸದೆ ರೀತಾ ಬಹುಗುಣ ಅವರ ಮೊಮ್ಮಗಳು ಸಾವನ್ನಪ್ಪಿರುವ ಬಾಲಕಿ.ಬಾಲಕಿಯು ಶೇ.60ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಳು. ಏರ್ ಆಯಂಬುಲೆನ್ಸ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿ ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಹೊಡೆಯಲು ಆರಂಭಿಸಿದ್ದಳು. ಈ ವೇಳೆ ನಡೆದ ದುರಂತದಲ್ಲಿ ಮಗು ಗಂಭೀರವಾಗಿ ಗಾಯಗೊಂಡಿದ್ದು ಸಾವನ್ನಪ್ಪಿದೆ.

- Advertisement -

Related news

error: Content is protected !!