- Advertisement -
- Advertisement -
ಕಡಬ: ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ.
ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ.
ವಿಠಲ ರೈ ಯವರು ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ಕಾರಿನ ಚಾಲಕ ನಿಲ್ಲಿಸದೇ ಕಡಬದತ್ತ ಹೋಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -