- Advertisement -
- Advertisement -
ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಮುಖ್ಯಸ್ಥರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರ್ಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಭದ್ರತೆ ನೀಡಲಾಗುತ್ತಿದೆ.

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಅದರಂತೆ ಸರ್ಕಾರ ಭದ್ರತೆ ಒದಗಿಸಿದ. ಈ ಹಿನ್ನೆಲೆ ಮನವಿಗೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ , ಗೃಹಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.


- Advertisement -








