Thursday, May 2, 2024
spot_imgspot_img
spot_imgspot_img

ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ; ಪ್ರಶಸ್ತಿ ಸ್ವೀಕರಿಸುವಂತೆ ಆಹ್ವಾನ

- Advertisement -G L Acharya panikkar
- Advertisement -

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗೆ ಕೇಂದ್ರ ಸರ್ಕಾರ ಹಿಂದೆ, ಘೋಷಿಸಿದ್ದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ನ.8ರಂದು ದೆಹಲಿಯಲ್ಲಿ ನಡೆಯಲಿದೆ. ಈ ಪ್ರಶಸ್ತಿಯನ್ನು ಸ್ವೀಕರಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ದೂರವಾಣಿ ಮೂಲಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ವಿಶ್ವೇಶತೀರ್ಥ ಶ್ರೀಗಳು ನೀಡಿದ ಕೊಡುಗೆ ಆಧರಿಸಿ ಕೇಂದ್ರ ಸರ್ಕಾರ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿತ್ತು. ಕೋವಿಡ್ ಸಾಂಕ್ರಾಮಿಕ ಹರಡುವಿಕೆಯಿಂದಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ.

- Advertisement -

Related news

error: Content is protected !!