


ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಶಿಗ್ಗಾಂವಿ, ಸಂಡೂರು, ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ. ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ.
ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 76.9 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ನಿಂದ ಪಠಾಣ್ ಯಾಸೀರ್ ಅಹ್ಮದ್ಖಾನ್ ಸೇರಿದಂತೆ 8 ಅಭ್ಯರ್ಥಿಗಳಿದ್ದು, ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಸಂಡೂರಲ್ಲಿ ಕಾಂಗ್ರೆಸ್ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ 6 ಮಂದಿ ಕಣದಲ್ಲಿದ್ದರು, ಇನ್ನೂ ಸಂಡೂರಿನಲ್ಲಿ ಶೇ.76.24 ರಷ್ಟು ಮತದಾನವಾಗಿದೆ .
ಚನ್ನಪಟ್ಟಣದಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿಂದ ಸಿ. ಪಿ. ಯೋಗೇಶ್ವರ್ ಸೇರಿದಂತೆ 31 ಮಂದಿ ಕಣದಲ್ಲಿದ್ದರು. ಚನ್ನಪಟ್ಟಣದಲ್ಲಿ ದಾಖಲೆಯ ಶೇ. 88.80 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
