- Advertisement -
- Advertisement -
ಉಳ್ಳಾಲ: ಬಿಹಾರ ಮೂಲದ ವ್ಯಕ್ತಿ ರಾತ್ರಿ ವೇಳೆ ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ತೊಕ್ಕೊಟ್ಟುನಲ್ಲಿರುವ ಮನೆಗೆ ಶ್ರವಣ್ ದಾಸ್ ಬಂದಿದ್ದರು. ರಾತ್ರಿ ವೇಳೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿ ವಾಪಸ್ ರೈಲ್ವೆ ಹಳಿ ದಾಟಿ ಬರುವಾಗ ರೈಲು ಢಿಕ್ಕಿ ಹೊಡೆದಿದೆ.
ರೈಲು ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗಳಾಗಿದ್ದು, ಶ್ರವಣ್ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಪರಿಶೀಲನೆ ನಡೆಸಿದಾಗ ಆತನ ಕಿಸೆಯಲ್ಲಿ ಆಧಾರ್ ಕಾರ್ಡ್ ದೊರಕಿತ್ತು. ಆ ಕಾರಣ ಗುರುತು ಪತ್ತೆ ಹಚ್ಚಲಾಗಿದೆ.
- Advertisement -