- Advertisement -
- Advertisement -
ಪೆರುವಾಯಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಬೇಡಿಕೆಯನ್ನಿಟ್ಟರು. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರ ಸಹಕಾರ, ಮಾರ್ಗದರ್ಶನದಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ನ ಅಧ್ಯಕ್ಷೆ ನೆಫೀಸಾ ಕಡೆಂಬಿಲ ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ರಶ್ಮಿ ಪೆರುವಾಯಿ ಇವರು ನೇರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ ಶಾಸಕರ ಮುಖಾಂತರ ಬಂಟ್ವಾಳ ತಾಲೂಕಿನ ಹಳ್ಳಿ ಪ್ರದೇಶವಾದ ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕರ್ನಾಟಕದ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್, ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಇಲಾಖಾ ಸಚಿವರನ್ನು ಭೇಟಿ ಮಾಡಿ ಗ್ರಾಮದ ಹಲವು ಬೇಡಿಕೆಗಳನ್ನು ಮನವಿ ಸಲ್ಲಿಸಿದರು.
- Advertisement -