ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಅ.ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಹಾಗೂ ಸಮುದಾಯ ಭವನದ ಉದ್ಘಾಟನೆ ನಡೆಯಲಿದೆ:- ಚರ್ಚ್ ನ ಧರ್ಮ ಗುರು ವಂ. ಫಾ. ಸೈಮನ್ ಡಿ’ಸೋಜ





ಪೆರುವಾಯಿ: ಮುಚ್ಚಿರಪದವಿನ ಫಾತಿಮಾ ಮಾತೆಯ ದೇವಾಲಯದ ಅಭಿವೃದ್ಧಿ ಕಾರ್ಯದ ಭಾಗವಾಗಿ ನಿರ್ಮಾಣ ಗೊಂಡ ಫಾತಿಮಾ ಮಾತಾ ಸಮುದಾಯ ಭವನದ ಉದ್ಘಾಟನೆ ಹಾಗೂ ಆರ್ಶೀವಚನ ಕಾರ್ಯಕ್ರಮ ಮೇ 5 ನೇ ಸೋಮವಾರದಂದು ನಡೆಯಲಿದೆ. ಈ ಬಗ್ಗೆ ಚರ್ಚ್ ನ ಸಭಾಭವನ ದಲ್ಲಿ ಪತ್ರಿಕಾ ಗೋಷ್ಠಿ ಕಾರ್ಯಕ್ರಮ ನಡೆಯಿತು.
ಪತ್ರಿಕಾಗೋಷ್ಠಿ ಯಲ್ಲಿ ಚರ್ಚ್ ನ ಧರ್ಮ ಗುರು ವಂ. ಫಾ. ಸೈಮನ್ ಡಿ’ಸೋಜ ಮಾತನಾಡಿ ‘ಪೆರುವಾಯಿ, ಮೂರು ದಶಕದ ಇತಿಹಾಸವಿರುವ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮ ವ್ಯಾಪ್ತಿಯ ಮುಚ್ಚಿರಪದವಿನ ಫಾತಿಮಾ ಮಾತೆಯ ದೇವಾಲಯವು ಹಲವು ಪವಾಡಗಳಿಗೆ ಸಾಕ್ಷಿಯಾಗಿದೆ. 140 ಕುಟುಂಬಗಳ ವ್ಯಾಪ್ತಿಯ ಈ ದೇವಾಲಯದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಅದರ ಭಾಗವಾಗಿ 2025 ರ ಮೇ 5 ರಂದು ಫಾತಿಮಾ ಮಾತಾ ಸಮುದಾಯ ಭವನದ ಉದ್ಘಾಟನೆ ಹಾಗೂ ಆರ್ಶೀವಚನ ನಡೆಯಲಿದೆ.
ಅಂದು ಬೆಳಗ್ಗೆ 9:15 ಗಂಟೆಗೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಅ.ವಂ. ಡಾ. ಪೀಟರ್ ಪಾವ್ಲ್ ಸಲ್ಡಾನ ನೇತೃತ್ವದಲ್ಲಿ ಪವಿತ್ರ ಬಲಿಪೂಜೆಯು ನೆರವೇರಲಿದ್ದು, ಬೆಳಗ್ಗೆ 10 ಗಂಟೆಗೆ ಸಮುದಾಯ ಭವನ ಉದ್ಘಾಟಿಸಿ ಆರ್ಶೀವಚಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಫರೀದ್ ಭಾಗವಹಿಸಲಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸಮುದಾಯ ಭವನದ ಉದ್ಘಾಟನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಶಾಸಕರು, ಕರ್ನಾಟಕ ವಿಧಾನ ಪರಿಷತ್ತು, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ದುರ್ಗಾ ಲಕ್ಷ್ಮೀ ಸೇವಾ ಪ್ರತಿಷ್ಠಾನ, ಶ್ರೀ ಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ, ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಾಸ್ಥಾನ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ, ಪೆರುವಾಯಿ ಜುಮ್ಮಾ ಮಸೀದಿಯ ಅಲ್ ಹಾಜ್ ಮೊಹಮ್ಮದ್ ಶರೀಫ್ ಮದನಿ, ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಅರುಣ್ ಫುಟಾಡೋ, ಮಾಜಿ ಶಾಸಕರಾದ ಜೆ.ಆರ್. ಲೋಬೊ ಮತ್ತತರ ಗಣ್ಯರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 6 ಗಂಟೆಗೆ, ತುಳುನಾಡಿನ ಖ್ಯಾತ ಕಲಾವಿದರಾದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು ಹಾಗೂ ಪ್ರಸಿದ್ಧ ಕಲಾವಿದರ ನಟನೆಯ ಏರ್ಲಾ ಗ್ಯಾರಂಟಿ ಅತ್ತ್ ನಾಟಕ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮ ದಲ್ಲಿ ಸರ್ವರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.
ಸಮುದಾಯ ಭವನದ ವಿಶೇಷತೆಫಾತಿಮಾ ಮಾತಾ ಸಮುದಾಯ ಭವನವು ಸುಮಾರು 1.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, 600 ಆಸನದ ವ್ಯವಸ್ಥೆ ಹೊಂದಿದೆ. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯದ, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಸೇರಿ ಹಲವು ಆಧುನಿಕ ವ್ಯವಸ್ಥೆ ವೈಶಿಷ್ಟ್ಯತೆ ಹೊಂದಿದೆ.
ಪತ್ರಿಕಾಗೋಷ್ಠಿಯಲ್ಲಿ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಡೆನಿಸ್ ಮೊಂತೆರೋ, ಕಾರ್ಯದರ್ಶಿ ವೈಲೇಟ್ ಕುವೆಲ್ಲೋ, ಸಮುದಾಯ ಭವನ ಕಟ್ಟಡ ಸಮಿತಿ ಸಂಚಾಲಕರು ಚಾರ್ಲ್ಸ್ ಡಿ ಸೋಜ, ಹಾಗೂ ಎಡ್ವರ್ಡ್ ಡಿಸೋಜ, ಪ್ರವೀಣ್ ಡಿ ಸೋಜ ಉಪಸ್ಥಿತರಿದ್ದರು.