- Advertisement -
- Advertisement -
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರುತ್ತಿದೆ. ಇದರ ನಡುವೆಯೇ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ದೇಶವು ಪರ್ಯಾಯ ಇಂಧನ ಬಳಕೆಯತ್ತ ಗಮನ ಹರಿಸಬೇಕಾದ ಸಮಯವಿದು ಎಂದು ಹೇಳಿದ್ದಾರೆ.
ಇಂಧನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಗಡ್ಕರಿ ರವರು, ಭಾರತದಲ್ಲಿ ಹೆಚ್ಚು ವಿದ್ಯುತ್ ಪೂರೈಕೆಯಾಗುತ್ತಿದೆ, ನಾನು ಈಗಾಗಲೇ ವಿದ್ಯುತ್ ಶಕ್ತಿಯನ್ನು ಇಂಧನವಾಗಿ ಬಳಕೆ ಮಾಡಿಕೊಳ್ಳುವ ಕುರಿತು ಪ್ರಚಾರ ಮಾಡುತ್ತಿದ್ದೇನೆ. ನಾವು ಭಾರತದಲ್ಲಿ 81% ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ತಯಾರಿಸುತ್ತಿದ್ದೇವೆ.
ಲಿಥಿಯಂ-ಐಯಾನ್ಗಳಿಗೆ ಪರ್ಯಾಯವಾಗಿ ಬಳಕೆ ಮಾಡಲು ಅಗತ್ಯ ಕ್ರಮಗಳನ್ನು ಸಚಿವಾಲಯ ಕೈಗೊಂಡಿದೆ. ಸರ್ಕಾರದ ಎಲ್ಲಾ ಪ್ರಯೋಗಾಲಯಗಳಲ್ಲಿ ಸಂಶೋಧನೆಗಳು ನಡೆಯುತ್ತಿದ್ದು, ಹೈಡ್ರೋಜನ್ ಇಂಧನ ಸೆಲ್ಸ್ ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದೆ ಎಂದು ವಿವರಿಸಿದರು.
- Advertisement -