Sunday, June 29, 2025
spot_imgspot_img
spot_imgspot_img

ಮಂಗಳೂರು: ವಿದ್ಯುತ್ ಶಾಕ್‌ ತಗುಲಿ ಪೆಟ್ರೋಲ್ ಪಂಪ್‌ ಸಿಬ್ಬಂದಿ ಸಾವು

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಮಂಗಳೂರು: ಏಣಿವೊಂದಕ್ಕೆ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡಿದ್ದ ಪೆಟ್ರೋಲ್ ಪಂಪ್ ಸಿಬ್ಬಂದಿ ಮೃತಪಟ್ಟ ಘಟನೆ ಕಾವೂರಿನ ಪೆಟ್ರೋಲ್ ಪಂಪ್‌ವೊಂದರಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ವಾರಾಣಾಸಿ ಮೂಲದ ಸಂದೀಪ್ ಕುಮಾರ್ ವರ್ಮ (45) ಎಂದು ಗುರುತಿಸಲಾಗಿದೆ.

ಪಂಪ್‌ನಲ್ಲಿ ಇಲೆಕ್ಟ್ರಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಸಂದೀಪ್ ರವರು ರವಿವಾರ ಕೆಲಸ ನಿಮಿತ್ತ ಏಣಿ ಕೊಂಡೊಯ್ದು ವಿದ್ಯುತ್ ಕಂಬಕ್ಕೆ ಒರಗಿಸಿಟ್ಟಿದ್ದರು. ಈ ಸಂದರ್ಭ ವಿದ್ಯುತ್ ಪ್ರವಹಿಸಿ ಸಂದೀಪ್ ಕುಮಾರ್ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!