Monday, May 6, 2024
spot_imgspot_img
spot_imgspot_img

ವಿಮಾನ ಪತನ ; ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತ್ಯು

- Advertisement -G L Acharya panikkar
- Advertisement -

ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ ಆರು ಮಂದಿ ಮೃತಪಟ್ಟ ಘಟನೆ ಜಿಂಬಾಬೈಯಲ್ಲಿ ವರದಿಯಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.

ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್ ಗಣಿ ಕಂಪನಿಯ ಮಾಲಕ ಹರ್ಪಾಲ್ ರಾಂಧವಾ, ಅವರ ಮಗ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರಿಯೊಜಿಮ್ ಒಡೆತನದ ಸೆಸ್ನಾ 206 ವಿಮಾನವು ಹರಾರೆಯಿಂದ ಜಿಂಬಾಬ್ಬೆಯ ಮುರೊವಾ ವಜ್ರದ ಗಣಿ ಕಡೆಗೆ ತೆರಳುತ್ತಿದ್ದಾಗ ಈ ದುರಂತ ಘಟನೆ ನಡೆದಿದೆ ಎಂದು ಜಿಂಬಾಬ್ಬೆಯ ‘ಐ ಹರಾರೆ’ ವರದಿ ಮಾಡಿದೆ. ರಿಯೊಝಿಮ್‌ನ ಒಡೆತನದಲ್ಲಿರುವ ಮುರೊವಾ ಡೈಮಂಡ್ಸ್ ಗಣಿ ಬಳಿ ವಿಮಾನ ಪತನಗೊಂಡಿದೆ.

- Advertisement -

Related news

error: Content is protected !!