Wednesday, May 1, 2024
spot_imgspot_img
spot_imgspot_img

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾಳಿ- ಪ್ರಕರಣ ದಾಖಲು

- Advertisement -G L Acharya panikkar
- Advertisement -

ಬೆಳ್ತಂಗಡಿ : ಅಕ್ರಮವಾಗಿ ಮದ್ಯವನ್ನು ಇರಿಸಿ ಮಾರಾಟ ಮಾಡುತ್ತಿದ್ದಾಗ,ಪೊಲೀಸ್ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಕುತ್ಲೂರು ಎಂಬಲ್ಲಿ ನಡೆದಿದೆ.

ದಿನಾಂಕ: 25.03.2024 ರಂದು ಸಂಜೆ, ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ, ಆರೋಪಿ ಸಂಜೀವ ಪೂಜಾರಿ ಎಂಬಾತನು ತನ್ನ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿ ಬಳಿ, ಅಕ್ರಮವಾಗಿ ಮದ್ಯವನ್ನು ಇರಿಸಿ ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ D ಮುರಗೋಡು ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ಆರೋಪಿತನ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ತಲಾ 180 ಎಂ.ಎಲ್. ಮದ್ಯ ಇರುವ ಪ್ಲಾಸ್ಟಿಕ್ ಬಾಟಲಿಗಳು- 16, ಮತ್ತು ತಲಾ 90 ಎಂ,ಎಲ್ ಮದ್ಯ ಇರುವ ಸ್ಯಾಚೆಟ್-01 ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿದ ಮದ್ಯದ ಒಟ್ಟು ಪ್ರಮಾಣ 2.970 ಲೀಟರ್ ಹಾಗೂ ಅಂದಾಜು ಮೌಲ್ಯ ರೂ 1320/- ಆಗಿರುತ್ತದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 28/2024 ಕಲಂ: 32, 34 ಅಬಕಾರಿ ಕಾಯ್ದೆ-1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!