- Advertisement -
- Advertisement -
ಗುಂಡು ಹಾರಿಸಿಕೊಂಡು ಕಾನ್ಸ್ಟೇಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ಮೃತ ಪೇದೆಯನ್ನು ಮಲ್ಲಿಕಾರ್ಜುನ (34) ಎಂದು ಗುರುತಿಸಲಾಗಿದೆ.
ಚಿತ್ತಾಪುರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಕಾನ್ಸ್ಟೆಬಲ್ ಪ್ರಾಣ ಬಿಟ್ಟಿದ್ದಾರೆ. ಮಲ್ಲಿಕಾರ್ಜುನ್ ಅವರು ಚುನಾವಣೆ ನಿಮಿತ್ತ ಫ್ಲೈಯಿಂಗ್ ಸ್ವ್ಕಾಡ್ ಕರ್ತವ್ಯದಲ್ಲಿದ್ದರು. ನಿನ್ನೆ ರಾತ್ರಿ ಚಿತ್ತಾಪುರ ತಹಸೀಲ್ದಾರ್ ಕಚೇರಿಯ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗುಂಡು ಹಾರಿಸಿಕೊಂಡು ಬದುಕು ಅಂತ್ಯಗೊಳಿಸಿದ್ದಾರೆ.
ಮಲ್ಲಿಕಾರ್ಜುನ್ ಅವರು ಚಿತ್ತಾಪುರ ತಾಲ್ಲೂಕಿನ ಶಹಬಾದ್ ಮಡ್ಡಿ ನಿವಾಸಿ. ಸಾವಿಗೆ ಕಾರಣ ಏನೆಂದು ತಿಳಿದುಬರಬೇಕಿದೆ. ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -