ಪ್ರೇಮ ವೈಫಲ್ಯದಿಂದ ನೊಂದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾದ ಗಟನೆ ಬೀದರ್ನಲ್ಲಿ ನಡೆದಿದೆ.. ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಉಮೇಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ್ ನಾಯಕ್ ಅವರು ಬಸವಕಲ್ಯಾಣ ನಗರದ ಟೂರಿಸ್ಟ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಉಮೇಶ್ ನಾಯಕ್ ಅವರು ಮೂಲತಃ ವಿಜಯನಗರ ಜಿಲ್ಲೆಯವರು. 2021ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಆಯ್ಕೆಯಾಗಿ ಬೀದರ್ನಲ್ಲಿ ನೇಮಕಾತಿ ಪಡೆದಿದ್ದರು. ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಸುತ್ತಿರುವ ಉಮೇಶ್ ನಾಯಕ್ ಅವರು ಪ್ರೇಮ ವೈಫಲ್ಯದಿಂದ ನೊಂದು ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವುದು ಪ್ರಾಥಮಿಕ ಮಾಹಿತಿ.
ಉಮೇಶ್ ನಾಯಕ್ ಅವರು ಒಬ್ಬ ಹುಡುಗಿಯನ್ನು ಪ್ರೀತಿಸುತ್ತಿದ್ದು, ಆಕೆ ಈಗ ನಿರಾಕರಣೆ ಮಾಡಿದ್ದರಿಂದ ಅವರು ನೊಂದಿದ್ದರು ಎಂದು ಹೇಳಲಾಗಿದೆ. ಬಸವ ಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.