- Advertisement -
- Advertisement -
ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ವಿಜಯವಾಡದ ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪವನ್ ಕುಮಾರ್ (34) ಮೃತಪಟ್ಟ ದುರ್ದೈವಿ.
ತಲ್ಲೂರು ಮಂಡಲದ ಜಗನಣ್ಣ ಲೇಔಟ್ನಲ್ಲಿ ಸೇವೆಗೆ ನಿಯೋಜಿಸಲ್ಪಟ್ಟಿದ್ದರು. ವಾರದ ಹಿಂದೆ ಅವರಿಗೆ ಹಾವು ಕಚ್ಚಿದೆ. ತಕ್ಷಣವೇ ಹಾವನ್ನು ಕೊಂದು, ಗುಂಟೂರಿನ ಜಿಜಿಎಚ್ಗೆ ದಾಖಲಿಸಲಾಯಿತು. ಬಳಿಕ ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಕಾನ್ಸ್ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.
- Advertisement -