- Advertisement -
- Advertisement -
ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಹೆಚ್ಚಾಗುತ್ತಲೇ ಇವೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಕೂಡಲೇ ಎಚ್ಚೆತ್ತ ಕೇಂದ್ರ ಬೇಹುಗಾರಿಕಾ ಸಂಸ್ಥೆಗಳು ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನುಮಾನಾಸ್ಪದ ಚಟುವಟಿಕೆಗಳ ಕುರಿತು ಮಾಹಿತಿ ಕಲೆ ಹಾಕುತ್ತಿವೆ. ಅಲ್ಲದೇ ಹೈ-ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ಇನ್ನು, ಶಂಕಿತರು ಬಸ್ನಲ್ಲಿ ಸ್ಫೋಟಕ ಸಾಗಾಟ ನಡೆಸುವ ಸಾಧ್ಯತೆ ಇದೆ. ಇದರೊಂದಿಗೆ ಡ್ರಗ್ಸ್ ಸಾಗಾಟದ ಮಾಹಿತಿಯೂ ಲಭ್ಯವಾಗಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಾಗಿಸುವ ಪಾರ್ಸಲ್ಗಳ ಮೇಲೆ ನಿಗಾ ವಹಿಸಬೇಕು. ಕಾರ್ಗೋ ಸರ್ವೀಸ್ಗೆ ಬರುವ ಪಾರ್ಸೆಲ್ಗಳ ತೀವ್ರ ತಪಾಸಣೆ ನಡೆಸಬೇಕು ಎಂದು ಸಿಬ್ಬಂದಿಗೆ ಎಚ್ಚರಿಕೆ ಕೊಡಲಾಗಿದೆ.
ಬಸ್ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಲಗೇಜ್ ಪರಿಶೀಲನೆ ಮಾಡಬೇಕು. ಸಾರಿಗೆ ಸಂಸ್ಥೆಯ ಸಿಬ್ಬಂದಿ ಎಚ್ಚರಿಕೆಯಿಂದಿರಬೇಕು ಎಂದು ಹೈ-ಅಲರ್ಟ್ ಆದೇಶ ಹೊರಡಿಸಲಾಗಿದೆ.
- Advertisement -