


ಬಂಟ್ವಾಳ : ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಲಾರಿ ನಿಲ್ಲಿಸಿ ಚಾಲಕರಿಬ್ಬರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ದಿನಾಂಕ: 04.06.2024 ರಂದು ಬೆಳಿಗ್ಗಿನ ಜಾವ ಪಾಣೆಮಂಗಳೂರಿನಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು, ಹಾಗೂ ಸಿಬ್ಬಂದಿಗಳು, ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ KA-21-C-4213 ಹಾಗೂ KA-19-AA-8752 ನೇ ನೊಂದಣಿ ಸಂಖ್ಯೆಯ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚನೆ ನೀಡಿದಾಗ, ಸದ್ರಿ ಟಿಪ್ಪರ್ ಲಾರಿಗಳನ್ನು ಅದರ ಚಾಲಕರು ರಸ್ತೆಯಲ್ಲಿ ನಿಲ್ಲಿಸಿ ಓಡಿ ಪರಾರಿಯಾಗಿದ್ದಾರೆ. ಬಳಿಕ ಸದ್ರಿ ಟಿಪ್ಪರ್ ಲಾರಿಗಳನ್ನು ಪರಿಶೀಲಿಸಿದಾಗ, ಅವುಗಳಲ್ಲಿ ಮರಳು ಲೋಡ್ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಟಿಪ್ಪರ್ ಲಾರಿ ಚಾಲಕರು ಯಾವುದೇ ಪರವಾನಿಗೆಯನ್ನು ಪಡೆಯದೇ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದುದು ಕಂಡುಬಂದ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿಅ.ಕ್ರ:- 96/2024, ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.