- Advertisement -
- Advertisement -
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಜಂಕ್ಷನ್ನಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ಸಂಚರಿಸಲು ಸವಾರರು ದಿನನಿತ್ಯ ಪರದಾಡುವಂತಾಗಿದ್ದು, ಇದೀಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಹೊಂಡ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದಾರೆ.
ಹೊಂಡಗಳಿಂದಾಗಿ ಜಂಕ್ಷನ್ ನಲ್ಲಿ ಅಪಘಾತಗಳು ಹೆಚ್ಚುತ್ತಿದ್ದು, ಅಲ್ಲದೇ ಟ್ರಾಫಿಕ್ ಸಮಸ್ಯೆಗಳಿಗೆ ಕೂಡಾ ಈ ಹೊಂಡಗಳು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೇ ಗುಂಡಿಗಳಿಗೆ ಕಾಂಕ್ರಿಟ್ ಹಾಕಿ ಮುಚ್ಚಿದ್ದು, ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇನ್ನು ಹೊಂಡ ಗುಂಡಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
- Advertisement -