Friday, April 19, 2024
spot_imgspot_img
spot_imgspot_img

ತಡರಾತ್ರಿ ವಿಧಾನಸೌಧದ ಕಚೇರಿಯಲ್ಲಿ ಹೋಮ‌-ಹವನ ಮಾಡಿಸಿದ ಸಚಿವ ಎಸ್ ಅಂಗಾರ

- Advertisement -G L Acharya panikkar
- Advertisement -

ಬೆಂಗಳೂರು: ಇತ್ತೀಚೆಗಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರು ವಿಧಾನ ಸೌಧದ ಕಚೇರಿಯಲ್ಲಿ ಹೋಮ ಹವನ, ಪೂಜಾ ಕಾರ್ಯ ನೆರವೇರಿಸಿದರು. ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿರುವ ಎಸ್‌. ಅಂಗಾರ ಅವರು ತಡರಾತ್ರಿ ನೂತನ ಕಚೇರಿಯಲ್ಲಿ ಹೋಮ ನಡೆಸಿದರು. ನಾಲ್ವರು ಅರ್ಚಕರಿಂದ ಹೋಮ, ಹವನ ನಡೆದಿತ್ತು. ವಾಸ್ತು ಹೋಮ ಹಾಗೂ ಗಣ ಹೋಮ‌ ನಡೆಸಿದರು.

ಬೆಳಿಗ್ಗೆ ಕಚೇರಿಯಲ್ಲಿ ಪೂಜಾಕಾರ್ಯ ನೆರವೇರಿಸಿದರು. ವಿಧಾನಸೌಧ ಕಚೇರಿಯಲ್ಲಿ (252 ಹಾಗೂ 253A) ಪೂಜಾ ವಿಧಿ-ವಿಧಾನಗಳನ್ನು ನಡೆಸಿ ಆರ್ಶೀವಾದ ಕೋರಲಾಯಿತು. ನಾಡಿನ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ನಿಮ್ಮೆಲ್ಲರ ಶುಭರ್ಶೀವಾದ ಭಗವಂತನ ಕೃಪೆ ಇರಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಎಸ್. ಅಂಗಾರ ಹೇಳಿಕೊಂಡಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎಸ್.ಅಂಗಾರ ಅವರ ಕಚೇರಿ ಪೂಜೆಗೆ ಆಗಮಿಸಿದ್ದರು.

- Advertisement -

Related news

error: Content is protected !!