ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ಸಂಜೆ ಬಹಳ ಅದ್ದೂರಿಯಾಗಿ ನಡೆಯಿತು.
ನವರಾತ್ರಿಯ ಸಂದರ್ಭದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜಾ ಕಾರ್ಯಕ್ರಮ ಎಂದಿನಂತೆ ಈ ಬಾರಿಯೂ ಹಲವು ಗಣ್ಯರ ಸಮ್ಮುಖದಲ್ಲಿ ಬಹಳ ಸಂಭ್ರಮದಿಂದ ನಡೆಯಿತು.
ಪೊಲೀಸ್ ಠಾಣೆಯಲ್ಲಿರುವ ಆಯುಧಗಳಿಗೆ ಮತ್ತು ವಾಹನಗಳಿಗೆ ಪೂಜೆಯನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಮಾರಪ್ಪ ಶೆಟ್ಟಿ ಬೈಲುಗುತ್ತು, ಅರುಣ್ ವಿಟ್ಲ, ರಮಾನಾಥ ವಿಟ್ಲ, ಅಶ್ರಫ್, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಯಾನಂದ ಉಜಿರೆಮಾರು, ಜಾಫರ್ ಸೇರಿದಂತೆ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಹೆಚ್ ಇ ನಾಗರಾಜ್, ಸಬ್ ಇನ್ಸ್ಪೆಕ್ಟರ್ ವಿದ್ಯಾ,ರತನ್ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಕುಟುಂಬ ಸಮೇತರಾಗಿ ಭಾಗವಹಿಸಿದರು.
ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಬಿಳಿ ಪಂಚೆ ಮತ್ತು ಗುಲಾಬಿ ಬಣ್ಣದ ಶರ್ಟ್ ನ್ನು ಧರಿಸಿ ಸಾಂಪ್ರದಾಯಿಕ ಉಡುಗೆಯೊಂದಿಗೆ ಸಂಭ್ರಮಿಸಿದರು.